ಚಿರಾಯು ಅಸೋಸಿಯೇಶನ್ ರಿ. ಕರ್ನಾಟಕ ಹಾಗೂ ಜನಸೇವಾ ಫೌಂಡೇಶನ್ ರಿ. ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ವಿದ್ಯಾವರ್ಧಕ ಸಂಘ ದಾರವಾಡದಲ್ಲಿ ಆದಿತ್ಯವಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಇಸ್ಮಾಯಿಲ್ ಶಾಫಿ ಬಬ್ಬುಕ್ಟೆಯವರಿಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆಯವರು ಕನ್ನಡ ನಾಡು ನುಡಿ ನೆಲ,ಜಲದ ರಕ್ಷಣೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಕ್ರಿಯಾತ್ಮಕ ಕಾರ್ಯ ತತ್ಪರತೆ ಹಾಗೂ ನಿಶ್ವಾರ್ಥ ಸೇವೆ ಸಲ್ಲಿಸಿದ್ದಾರೆ.
ಹುಟ್ಟು ಹೋರಾಟಗಾರ, ಛಲವಾದಿ, ಅಪ್ರತಿಮ ಸಮಾಜಸೇವಕ, ಸದಾ ಚಟುವಟಿಕೆಯಲ್ಲಿರುವ ಚಲನಶೀಲ ಶಕ್ತಿಯ ರೂಪವಾಗಿದ್ದಾರೆ,
ಇವರು ಕೊರೋನಾ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿ, ಬಡವರಿಗೆ ಸಹಾಯ ಮಾಡಿ ಸಮಾಜದ ಬಡ ಜನರ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಡಿದ್ದಾರೆ,
ಕಾರ್ಯಕ್ರಮವನ್ನು
ದಾರವಾಡ ಪೋಲೀಸ್ ಠಾಣೆಯ ಎ.ಎಸ್.ಐ ಉದ್ಘಾಟಿಸಿದರು.
ಜನಸೇವಾ ಪೌಂಡೇಶನ್ ಅಧ್ಯಕ್ಷ ಡಾ.ಎಫ್.ಕೆ ನಿಗದಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು.
ಹುಬ್ಬಳ್ಳಿ ದಿವ್ಯ ಜ್ಞಾನ ಗುರುಕುಲ ಮತ್ತು ಜ್ಯೋತಿಷ್ಯ ಕೇಂದ್ರದ ಅಧ್ಯಕ್ಷ ವೇದಮೂರ್ತಿ ಬಸವಲಿಂಗಯ್ಯ ಶಾಸ್ತ್ರಿಗಳು ಸೂರಗಿಮಠ, ಶ್ರೀ ಕಾಡಯ್ಯಾ ಶಿವಮೂರ್ತಿಹೀರೇಮಠ, ಡಾ. ರಮೇಶ್ ಕುಮಾರ್ ಶಾಸ್ತ್ರಿ, ಡಾ. ಸತೀಶ ಮಲ್ಲಯ್ಯಾ ಸ್ವಾಮಿ ಶಾಸ್ತ್ರಿಗಳು, ಡಾ. ಸಂತೋಷ ಶಾಸ್ತ್ರಿ ಗಳು ಹೀರೇಮಠ, ಎಸ್.ಡಿ. ನಾಗರಾಜ್ ಸಿದ್ದನಕಟ್ಟೆ, ನಾಗಪ್ಪ ಬಂಡೀವಡ್ಡರ, ಶ್ರೀಮತಿ ಬೇಬಿ ರಾಣಿ ಆರ್, ದೇವಕಿ ಯೋಗಾನಂದ, ಚಿರಾಯು ಅಸೋಸಿಯೇಶನ್ ಕರ್ನಾಟಕ ಅಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಕ್ಕನವರ ಮೊದಲಾದವರು ಉಪಸ್ಥಿತರಿದ್ದರು.
Trending
- ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದೆ, ಸಿಇಟಿ ಸುವ್ಯವಸ್ಥಿತ ನಡೆಸಲು ಜಿಲ್ಲಾಧಿಕಾರಿ ಸೂಚನೆ
- ತುಳು ಚಲನಚಿತ್ರ “ದೇವ್ ದಾಸ್ ನ ಲೀಲಾ” ಇದೇ ಏಪ್ರಿಲ್ 24ರಂದು ಕರಾವಳಿಯಾದ್ಯಂತ ತೆರೆಗೆ
- ಮಂಗಳೂರಿನಲ್ಲಿ “ಕೊರಗ್ಲಾ ತನಿಯಾ” ಮತ್ತು “ಕನ” ಚಿತ್ರಗಳಿಗೆ ನಾಳೆ ಮುಹೂರ್ತ
- ಮೇ 28–29: ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಅಮ್ಮಮಂಗಳೂರಿಗೆ, ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ”.
- ತ್ರಿಶೂರ್ ಪಟಾಕಿ ದುರಂತ: ಪೂರಂ ಪಟಾಕಿ ಪ್ರದರ್ಶನದ ಬಗ್ಗೆ ಸರ್ಕಾರ ತೀರ್ಮಾನ – 24 ಕ್ಕೆ ಏರಿಕೆ
- ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ಗಾಗಿ ಉಪಯೋಗಿಸಿಕೊಳ್ಳುತ್ತಿದೆ :ನಿಖಿಲ್ ಕುಮಾರಸ್ವಾಮಿ
- ಜನರೊಂದಿಗೆ ಜನತಾದಳ” ಅಭಿಯಾನಕ್ಕೆ ಕಡೂರುನಲ್ಲಿ ಭಾರೀ ಸ್ಪಂದನೆ: ಕಾರ್ಯಕರ್ತರ ಮಹಾಸಂಗಮ
- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫನ್ನೀರ್ ವಾರ್ಡಿನ ಸೆಮಿನರಿ ವೀವ್ 1ನೇ ಅಡ್ಡರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ
