Monday, July 22, 2024
spot_img
More

    Latest Posts

    ಕಾರ್ಕಳ: ಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಇಬ್ಬರು ಕಾರ್ಮಿಕರು ಮೃತ್ಯು ಸಾವಿಗೀಡಾದ ಕಾರ್ಮಿಕರಿಗೆ ಸೂಕ್ತ ಪರಿಹಾರ ಕಲ್ಪಿಸಿ ಹಾಗೂ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

    ಕಾರ್ಕಳ: ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ನಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ.

    ನಿಟ್ಟೆ ಗ್ರಾಮದ ದೂಪದಕಟ್ಟೆ ಮರಿಪರಪುವಿನಿಂದ ಕಲ್ಲು ಲೋಡ್ ಮಾಡಿ ಮಂಗಳೂರು ಹೊರಡುವಾಗ ಲಾರಿ ನಿಯಂತ್ರಣ ತಪ್ಪಿ ಹೊಂಡಕ್ಕುರುಳಿದೆ. ಈ ಪರಿಣಾಮ ಕೊಪ್ಪಳ ಜಿಲ್ಲೆ ಎಲಬುರ್ಗಿ ದೇವಾಳಪುರದ ಕರಿಯಪ್ಪ (22) ಮತ್ತು ನರಿಯಪ್ಪ (27) ಮೃತಪಟ್ಟಿದ್ದಾರೆ.

    ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸಾವಿಗೀಡಾದ ಕಾರ್ಮಿಕರಿಗೆ ಸೂಕ್ತ ಪರಿಹಾರ ಕಲ್ಪಿಸಿ ಹಾಗೂ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ತುಳುನಾಡ ರಕ್ಷಣಾ ವೇದಿಕೆ ಒತ್ತಾಯಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss