2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು. ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು. ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಮನವಿಯನ್ನು ಪರಿಗಣಿಸಿ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಮೀನುಗಾರಿಕಾ ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯ, ಗರಿಷ್ಠ ಪರಿಹಾರಕ್ಕೆ ಸರಕಾರವನ್ನು ಆಗ್ರಹಿಸಿದ ಸ್ಥಳೀಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Trending
- ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ 🗞️
- ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ :- ಶಾಸಕ ಕಾಮತ್
- ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು — ಉದ್ಯಮಿ ರೋಶನ್ ಸಲ್ದಾನಾ ಅವರ 2.85 ಕೋಟಿ ರೂ. ಆಸ್ತಿ ಇಡಿ ಮುಟ್ಟುಗೋಲು
- ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
- “ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
- ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ
- ಐಕ್ಯಂ ವಿಶೇಷ ಮಕ್ಕಳ ಶಾಲೆಯಲ್ಲಿ ದೀಪಾವಳಿ ಆಚರಣೆ
- ಉಮ್ರಾ ಯಾತ್ರೆಗೆ ತೆರಳಿದ ಜರ್ಗುಮ್ ಫೌಂಡೇಶನ್ ಸದಸ್ಯರಿಗೆ ಸನ್ಮಾನ
