ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆದು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಖ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನ ನೀಡುವುದು ನಮ್ಮ ಗಮನದಲ್ಲಿದೆ. ಆದರೆ ನಿಯಮಗಳ ಪಾಲನೆ ಆಗಬೇಕಿದೆ. ಡಾ| ಮೋಹನ್ ಆಳ್ವರ ಸಮಿತಿ ನೀಡಿದ ವರದಿ ನಮ್ಮ ಮುಂದಿದೆ. ಆದರೆ ಕಾನೂನು ಇಲಾಖೆಯು ಅನ್ಯ ರಾಜ್ಯಗಳ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಬಯಸಿರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಸಮಿತಿ ಕಳುಹಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು. ನಾವು ಈಗಾಗಲೇ ಈ ಮೂರು ರಾಜ್ಯಗಳಿಗೆ ಪತ್ರ ಬರೆದು ದ್ವಿಭಾಷೆ ಅಳವಡಿಕೆ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೆವು. ಆದರೆ ಈ ರಾಜ್ಯಗಳಿಂದ ಸಮರ್ಪಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ನಾವೇ ಈಗ ತಂಡ ಕಳುಹಿಸಲು ಮುಂದಾಗಿದ್ದೇವೆ. ನಮ್ಮ ತಂಡ ನೀಡುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸುತ್ತೇವೆ ಎಂದು ಶಿವರಾಜ ತಂಗಡಿ ಭರವಸೆ ನೀಡಿದರು. ಪ್ರತಾಪಸಿಂಹ ನಾಯಕ್ ಮಾತನಾಡಿ, 20-25 ವರ್ಷಗಳಿಂದ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಪ್ರಯತ್ನ ನಡೆಯುತ್ತಿದೆ. ಆದರೆ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣವೇನು ಎಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು. ಹರೀಶ್ಕುಮಾರ್ ಮಾತನಾಡಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆಯಬೇಕು ಎಂದು ಆಗ್ರಹಿಸಿದರು. ಭಾರತಿ ಶೆಟ್ಟಿ ಹಾಗೂ ತೇಜಸ್ವಿನಿ ಅವರು ದನಿಗೂಡಿಸಿದರು
Trending
- ಮಂಗಳೂರು : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಬೈಕ್ ಸವಾರನ ಕೊಲೆ ಯತ್ನ , ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆಯಲ್ಲಿ ನೇತಾಡಿಕೊಂಡ ಪಾದಚಾರಿ ಮಹಿಳೆ
- ತುಳುವರ್ಲ್ಡ್ ಫೌಂಡೆಶನ್ ಮಾರ್ಚ್ 16 ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ವಾಗ್ಗೇವಿ ಸಭಾಂಗಣದಲ್ಲಿ ತುಳು ರಾಷ್ಟ್ರೀಯ ವಿಚಾರ ಸಂಕಿರಣ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಆತ್ಮಸಮ್ಮಾನ’
- ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಶೇಕಡಾ 60% ತುಳು ಲಿಪಿ ಅಳವಡಿಸುವರೇ ಕಾನೂನು ಜಾರಿಗೆ ತರಲು ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ತುಳು ಸಾಹಿತಿ “ಉಡಲ್” ತುಳು ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ ಪತಿ ಸದಾಶಿವ ಬಂಗೇರ ನಿಧನ , ತುಳುನಾಡ ಸಂಘ ಸಂಸ್ಥೆಗಳ ಪ್ರಮುಖರ ಸಂತಾಪ
- ಮಾರ್ಚ್ 12 ಮೂಡುಬಿದಿರೆ ಕ್ಷೇಮ ವೇಣುಪುರ ಮೂಲ ನಾಗ ಸ್ಥಾನ ಪುನರ್ ಜೀರ್ಣೋದ್ದಾರ ಗೊಂಡು ಪುನರ್ ಪ್ರತಿಷ್ಠಾಪನೆ
- ಬಂಟರ ಯಾನೆ ನಾಡವರ ಸಂಘ ಹೊಸನಗರ(ರಿ ), ಬೆಂಗಳೂರು ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ
- ತುಳು ಭಾಷೆದ ಅಧಿಕೃತ ಸ್ಥಾನಮಾನೋಗಾದ್ ವಿಶೇಷ ಪತ್ರಿಕಾ ಗೋಷ್ಠಿ – ರಾಜರಾಮ ಶೆಟ್ಟಿ