ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಸರ್ವ ಕಾಲೇಜು ವಿದ್ಯಾರ್ಥಿ ಕ್ರಿಯಾ ಸಮಿತಿ ಅಧ್ಯಕ್ಷರಾಗಿ ,ವಿದ್ಯಾರ್ಥಿಪರ ಹಲವಾರು ಹೋರಾಟಗಳನ್ನು ನಡೆಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತನ್ನದೇ ಆದ ಚಾಪನ್ನ ಮೂಡಿಸಿ ನಂತರ ವಕೀಲ ವೃತ್ತಿಯನ್ನು ಪ್ರಾರಂಭಿಸಿ ನ್ಯಾಯಾಲಯದಲ್ಲಿ ಯಶಸ್ವಿ ವಕೀಲರೆಂದು ಹೆಸರುಗಳಿಸಿರುತ್ತಾರೆ. ತುಳುನಾಡ ರಕ್ಷಣಾ ವೇದಿಕೆ ವಕೀಲರ ಘಟಕದ ಅದ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಅಧ್ಯಕ್ಷರಾಗಿ ಉತ್ತಮ ರೀತಿಯಲ್ಲಿ ಪಕ್ಷವನ್ನು ಸಂಘಟಿಸಿ ಯುವ ನಾಯಕರೆಂದು ಜಿಲ್ಲೆಯಲ್ಲಿ ಜನಪ್ರಿಯ ರಾಗಿರುತ್ತಾರೆ. ಪ್ರಸ್ತುತ ರಾಘವೇಂದ್ರ ರಾವ್ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಹಿಂದುಳಿದ ಮೋರ್ಚದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶುಭ ಸಂದರ್ಭದಲ್ಲಿ ತಮಗೆ ಹೃದಯಪೂರ್ವಕವಾದ ಅಭಿನಂದನೆಗಳು. ತಮ್ಮ ಆಯ್ಕೆಗೆ ಕಾರಣಕರ್ತರಾದ ರಾಜ್ಯ ಭಾಜಪ ಕಾರ್ಯದರ್ಶಿ ಬ್ರಿಜೇಶ್ ಚೌಟ ,ನಮ್ಮ ನೆಚ್ಚಿನ ಶಾಸಕರಾದ ವೇದ ವ್ಯಾಸ ಕಾಮತ್ ಹಾಗೂ ಜಿಲ್ಲಾಧ್ಯಕ್ಷರವರಿಗೂ ಕೃತಜ್ಞತೆಗಳು.ತಮ್ಮ ಉಪಾಧ್ಯಕ್ಷ ಅವಧಿಯಲ್ಲಿ ಜನತಾ ಪಕ್ಷವು ಇನ್ನಷ್ಟು ಬಲಿಷ್ಠವಾಗಲಿ ಎಂದು ಅಪೇಕ್ಷಿಸುತ್ತೇನೆ. ತಮಗೆ ಶುಭಾಶಯಗಳು.
Trending
- ಜುಲೈ 20 ಕ್ಕೆ ಕಾಪು ತಾಲೂಕು ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಮ್ಮೇಳನ
- ಕೋಟ್ಯಂತರ ರೂ. ವಂಚಿಸಿದ ಪ್ರಕರಣ : ಆರೋಪಿಯ ರೋಶನ್ ಸಲ್ಡಾನ(45) ಬಂಧನ….!!
- ಮಂಗಳೂರು : ಮಂಗಳೂರಿನಲ್ಲಿ ಆ.7 ರಿಂದ 10 ರ ವರೆಗೆ ‘ ಮಿಸ್ ಡಿವೈನ್ ದಿವಾ’ ಪೇಜೆಂಟ್ ಸೌಂದರ್ಯ ಸ್ಪರ್ಧೆ ಆಯೋಜನೆ …!
- ನಿವೃತ್ತ ಪ್ರಿನ್ಸಿಪಾಲ್ ವಿಶ್ವನಾಥ್ ಕೆ. ಅವರಿಗೆ ಶ್ರದ್ಧಾಂಜಲಿ
- ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ನೇತೃತ್ವದಲ್ಲಿ 2025 ನೇ ಸಾಲಿನ “ಕೆಸರ್ಡ್ ಡೊಂಜಿ ದಿನ
- ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ವಶಕ್ಕೆ…!!
- ಆರಾಧನಾಲಯಗಳು ಮಾನವ ವಿಕಾಸದ ಕೇಂದ್ರಗಳಾಗಬೇಕು : ಗಣೇಶ ಶೆಟ್ಟಿ ಗುಡ್ಡೆಗುತ್ತು. ಮರೋಳಿಯಲ್ಲಿ ತುಳುವ ಮಹಾಸಭೆ ನೂತನ ಘಟಕ ಆರಂಭ
- ಮೂಡುಬಿದ್ರೆ : ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ಪೋಲಿಸ್ ದಾಳಿ ಹಲವರ ಬಂಧನ