ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು ಕನ್ನಡ ಸಂಘ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಹಕಾರದೊಂದಿಗೆ ಭಗವಾನ್ ಬುದ್ಧ ಜಯಂತಿ ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿ.ವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ ಉದ್ಘಾಟಿಸಿ ಮಾತನಾಡಿದರು. ಬುದ್ಧ ಕೇವಲ ವ್ಯಕ್ತಿಯಲ್ಲ ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು. ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಬಯಸುತ್ತಾನೆ. ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ ಎಷ್ಟು ಶ್ರೀಮಂತನಾಗಿದ್ದರೂ ಜೀವನದಲ್ಲಿ ದುಃಖವಿಲ್ಲದವನು ಯಾರು ಇಲ್ಲ ಎಂದು ಗೌತಮ ಬುದ್ಧ ಹೇಳುತ್ತಾರೆ. ಹಾಗಾಗಿ ದುಃಖದಿಂದ ಹೊರಬರುವ ಮಾರ್ಗವನ್ನು ಕಂಡುಹಿಡಿಯುತ್ತಾರೆ. ಬುದ್ಧನ ಪ್ರಕಾರ ಮನುಷ್ಯನ ಅತಿಯಾದ ಆಸೆಗಳೇ ದುಃಖಕ್ಕೆ ಮೂಲ ಕಾರಣ. ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾಧವ. ಕೆ ವಂದಿಸಿದರು.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
