ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
