ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – 2025-26ರಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ
- ಎಸ್ಸಿಡಿಸಿಸಿ ಬ್ಯಾಂಕ್ಗೆ ದಾಖಲೆ ಸಾಧನೆ – ರೂ.20,226 ಕೋಟಿ ವ್ಯವಹಾರ
- 🕯️ ಬಂಟ್ವಾಳದಲ್ಲಿ ಭಕ್ತಿ ಭಾವದಿಂದ ಶುಭ ಶುಕ್ರವಾರ ಆಚರಣೆ
- ಹೇರಾಡಿ ಆದಿಶೇಷನಾಗ ಸನ್ನಿಧಿ ವಾರ್ಷಿಕೋತ್ಸವ: ಪೊಲೀಸರಿಗೆ ಗೌರವ ಸನ್ಮಾನ
