ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಗಲಾಟೆ: ಮೂವರು ಸೇರಿದಂತೆ ಇತರರ ವಿರುದ್ಧ ಪ್ರಕರಣ
- ಮಂಗಳೂರು ರೈಲ್ವೆ ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ
- ಯುವ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ ಸುರತ್ಕಲ್ನಲ್ಲಿ ಸೆ. 2ರಂದು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ
- ಬ್ರಹ್ಮಾವರ ಬೈಕಾಡಿಯಲ್ಲಿ ನೂತನ ತುಳು ಟೆಲಿ ಮೂವಿಗೆ ಮುಹೂರ್ತ ತುಳು ಭಾಷೆ, ಸಂಸ್ಕೃತಿ ಹಾಗೂ ಕರಾವಳಿಯ ಬದುಕಿನ ಅನಾವರಣಕ್ಕೆ ಹೊಸ ಪ್ರಯತ್ನ
- ಶಿವಪುರದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ಶ್ರೀ ರಾಯರ 52ನೇ ಆರಾಧನಾ ಮಹೋತ್ಸವ
- ಪೋಕ್ಸೋ ಪ್ರಕರಣ: ಆರೋಪಿ ಬಂಧನಕ್ಕೆ ಆಗ್ರಹ ರಾಜಕೀಯ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಲಿ – ಹಕೀಂ ಕೂರ್ನಡ್ಕ
- ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಮಂಗಳೂರು ವಲಯ ಸಮಿತಿ ರೂಪೀಕರಣ ಸಭೆ ಸೆ.3ರಂದು
- ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ
