ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
- ಸಂತ್ರಸ್ತ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ‘ಕುಂಭ ಕುಟೀರ’ ಮನೆ ಹಸ್ತಾಂತರ,ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಸೇವೆಯ ಮಾದರಿ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ
