ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ಟಿ-55 ಯುದ್ಧ ಟ್ಯಾಂಕ್ ಲೋಕಾರ್ಪಣೆ: ದೇಶಭಕ್ತಿಯ ಸಂಕೇತವಾಗಿ ಸಾರ್ವಜನಿಕರಿಗೆ ಸಮರ್ಪಣೆ
- ಉಡುಪಿ: ಆಟಿಡೊಂಜಿ ದಿನಾಚರಣೆಗೆ ಭರ್ಜರಿ ಸಿದ್ಧತೆ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪೂರ್ವಭಾವಿ ಸಭೆ ಯಶಸ್ವಿ
- ನ್ಯಾಯದ ಮೇಲಿನ ನಂಬಿಕೆಗೆ ಮತ್ತೊಂದು ಬಲ — ಮನೀಷ್ಗೆ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು
- ಪಳ್ಳಿ ದರ್ಸ್ ಉದ್ಘಾಟನೆ: ಮಲ್ಲಾರು–ಮಜೂರಿನಲ್ಲಿ ಜ್ಞಾನ ದೀಪ ಬೆಳಗಿತು
- ಮಂಗಳೂರು: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್ನಿಂದ ಭವ್ಯ ಸನ್ಮಾನ
- ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣಕ್ಕೆ ಮೂಡುಬಿದಿರೆಯಲ್ಲಿ ಚಾಲನೆ
- ಮದ್ಯಪಾನ ಮಾಡಿ ವಾಹನ ಚಲಾಯಿಸಿ ಮೃತಪಟ್ಟರೆ ಪೂರ್ಣ ವಿಮಾ ಪರಿಹಾರವಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
- ಪಿಲಿಕುಳ ನಿಸರ್ಗಧಾಮಕ್ಕೆ ಟಿ.ಎ. ಶರವಣ ಭೇಟಿ – ಅಭಿವೃದ್ಧಿ ಕುರಿತ ಸಭೆಯಲ್ಲಿ ಭಾಗವಹಿಸಿ ಸಮಾಲೋಚನೆ
