ಮಂಗಳೂರು :- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24/04/2025ರಂದು ಸಂಭವಿಸುತ್ತಿರುವ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳನ್ನು ಪರಿಹರಿಸಿಕೊಂಡರು. ಆದರೆ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿರುವ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಅದರ ಅನುಭವವನ್ನು ಪಡೆಯಲು ಸಾಧ್ಯವಾಗಲಿಲ್ಲ. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.
ಬೆಂಗಳೂರಿನ ಜವಾಹರ್ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.
ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು.
Trending
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಹಾರ್ದಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ
- ಜನತಾ ದಳ (ಜಾತ್ಯತೀತ) ಪಕ್ಷದ ವತಿಯಿಂದ “ಜನತಾ ಸಮಾವೇಶ ಹಾಗೂ ಬೆಳ್ಳಿ ಹಬ್ಬ” ಕಾರ್ಯಕ್ರಮ ಅದ್ದೂರಿಯಾಗಿ, ಅಭೂತಪೂರ್ವ ಜನಸಾಗರದ ನಡುವೆ ಯಶಸ್ವಿ
- ಬೆಂಗಳೂರು ಜಿಬಿಎ ಚುನಾವಣೆ: ಜೆಡಿಎಸ್ಗೆ ಬೆಂಬಲ ನೀಡಿ – ಕುಮಾರಸ್ವಾಮಿ ಮನವಿ
- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
