ಮಂಗಳೂರು :- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24/04/2025ರಂದು ಸಂಭವಿಸುತ್ತಿರುವ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳನ್ನು ಪರಿಹರಿಸಿಕೊಂಡರು. ಆದರೆ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿರುವ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಅದರ ಅನುಭವವನ್ನು ಪಡೆಯಲು ಸಾಧ್ಯವಾಗಲಿಲ್ಲ. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.
ಬೆಂಗಳೂರಿನ ಜವಾಹರ್ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.
ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು.
Trending
- ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
- ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
- ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
- ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
- ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
- ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
- ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
- ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ