ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.
ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ ಮೊಬೈಲ್ ನಂಬರ್ 9364062517, ಕಚೇರಿ ದೂರವಾಣಿ ಸಂಖ್ಯೆ 08242950997 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ
Trending
- ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್
- ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದ ದಕ್ಷ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್
- ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ
- ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ
- ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ
- ಪಿಲಿಕುಳ ಜೂನ್ 14 ರಿಂದ ಹಣ್ಣುಗಳ ಮೇಳ
- ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್
- ಹೋಟೆಲ್ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು: ಜಿ.ಪಂ ಸಿ.ಇ.ಒ ಸೂಚನೆ