ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.
ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ ಮೊಬೈಲ್ ನಂಬರ್ 9364062517, ಕಚೇರಿ ದೂರವಾಣಿ ಸಂಖ್ಯೆ 08242950997 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ
Trending
- ಬೀದಿ ನಾಯಿಗಳ ಕಾಟ: ರಾಜ್ಯ ಸರ್ಕಾರಗಳು ಹೊಣೆಗಾರಿಕೆ ವಹಿಸಬೇಕು – ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ
- ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
- ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಟೆಕ್ಕಿ ಶರ್ಮಿಳಾ ಹತ್ಯೆ: ಬೆಂಕಿ ಅವಘಡದ ಹಿಂದೆ ಭೀಕರ ಸತ್ಯ ಬಯಲು | 18 ವರ್ಷದ ಆರೋಪಿಯ ಬಂಧನ
- ಸುನಂದ ಕೋಟ್ಯಾನ್ ಅವರಿಗೆ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ
- ಚಿಕ್ಕಮಗಳೂರು | ಹಣದಾಸೆಗೆ ಹೆತ್ತ ಮಗಳನ್ನೇ ದಂಧೆಗೆ ದೂಡಿದ ಪಾಪಿ ತಂದೆ – ಬೀರೂರಿನಲ್ಲಿ ಭಯಾನಕ ಪ್ರಕರಣ ಬಹಿರಂಗ
- ಕಲಾ ಪರ್ಬ” ಚಿತ್ರ–ಶಿಲ್ಪ–ಸಾಂಸ್ಕೃತಿಕ ಮೇಳವು ಜ.9ರಿಂದ 11ರವರೆಗೆ ಕದ್ರಿ ಪಾರ್ಕ್ನಲ್ಲಿ
- ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿಯಾಗಿ ಬೆಳ್ಳಿಯಪ್ಪ ಕೆ. ಯು ನೇಮಕ
