ತಲಪಾಡಿ : ಭ್ಯಾರತಿ ಕವಿ, ಸಂಸ್ಕೃತಜ್ಞ ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀ ಸುಬ್ಬ ಪಕ್ಕಳ ಪಂಜಾಳ (80) ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು.
ತಲಪಾಡಿಯ ಕಾರಂತರ ಪಾಲು ಮನೆಯವರಾಗಿ ಪ್ರಸಿದ್ಧರಾಗಿದ್ದ ಶ್ರೀ ಪಂಜಾಳ ಅವರು, ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ರ್ಯಾಂಕ್ ವಿದ್ಯಾರ್ಥಿಯಾಗಿದ್ದು, ನಂತರ ಶಿಕ್ಷಕರಾಗಿ ಹಾಗೂ ಪ್ರಾಂಶುಪಾಲರಾಗಿ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದ್ದರು.
1976 ರಿಂದ 1981ರವರೆಗೆ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ (ಈಗಿನ ಪಿ.ಎ. ಕಾಲೇಜು) ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು, ಬಳಿಕ ಬೆಂಗಳೂರು ಸರ್ಕಾರಿ ಕಾಲೇಜಿನಲ್ಲಿ ಮುಖ್ಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ತಲಪಾಡಿ–ದೇವಿಪುರ ಪರಿಸರದಲ್ಲಿ ಹಿರಿಯ ಶಿಕ್ಷಕರಾಗಿ ಗುರುತಿಸಿಕೊಂಡಿದ್ದ ಅವರು, ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿ ಅವರ ಜೀವನಕ್ಕೆ ದಾರಿ ತೋರಿದವರು. ನಿವೃತ್ತಿಯ ನಂತರವೂ ವಿವಿಧ ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳೊಂದಿಗೆ ತಲೆ ಸಂಯೋಜಕರಾಗಿ ಕಾರ್ಯನಿರ್ವಹಿಸಿ, ಉಚಿತ ಶಿಕ್ಷಣ ಹಾಗೂ ಮಾರ್ಗದರ್ಶನ ನೀಡುತ್ತಿದ್ದರು.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ.
ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿದ ಅವರು, ತಮ್ಮ ಜೀವಿತಾವಧಿಯಲ್ಲೇ ದೇಹದಾನ ಮಾಡುವ ಕುರಿತು ಕರಾರು ಬರೆದು, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾನ ಮಾಡಿರುವುದು ಗಮನಾರ್ಹವಾಗಿದೆ.
ಮೃತರ ಅಂತಿಮ ಯಾತ್ರೆ ಅವರ ಕೋರಿಕೆಯಂತೆ ಪಿ.ಎ. ಕಾಲೇಜು ಸಮೀಪದ ಅವರ ಸ್ವಂತ ಮನೆಯಿಂದ ಇಂದು ಸಂಜೆ 5.30 ಗಂಟೆಗೆ ನೆರವೇರಲಿದೆ.
ಅವರ ನಿಧನದಿಂದ ಹಾರೋ ವಿಧದ ಸಮುದಾಯಕ್ಕೆ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು

