ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ನಗರದ ರಾಜಾಜಿನಗರದ ಕಾರ್ಮಿಕ ವಿಮಾ ಆಸ್ಪತ್ರೆ (ಇಎಸ್ಐ) ಈ ಘಟನೆ ನಡೆದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಚಾಮರಾಜಪೇಟೆಯ ದುರ್ಗಾ (40) ಹಾಗೂ ಕೆ.ಪಿ. ಅಗ್ರಹಾರದ ಮುನಿರಾಜು (35) ಅವರ ಮೃತದೇಹಗಳು ಆಸ್ಪತ್ರೆಯ ಶವಗಾರದಲ್ಲಿದ್ದವು. ಕಳೆದ ಮೂರು ದಿನಗಳ ಹಿಂದೆ ಶವಾಗಾರದ ಸ್ವಚ್ಛತೆಗೆ ಕೆಲಸಗಾರರು ತೆರಳಿದ್ದ ವೇಳೆ ಶವಗಳು ಬಾಕಿಯಾಗಿರುವುದು ಗೊತ್ತಾಗಿದೆ. 2020ರ ಜುಲೈನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಮೃತದೇಹಗಳನ್ನು ಶವಗಾರದಲ್ಲಿ ಇಡಲಾಗಿತ್ತು.