ಬ್ರಹ್ಮಾವರ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
Trending
- ಕೋಡಿ ಬೇಂಗ್ರೇ ಡೆಲ್ಟಾ ಬೀಚ್ ದುರಂತ : ಪ್ರವಾಸೋದ್ಯಮದ ಹೆಸರಿನಲ್ಲಿ ಮಾನವ ಜೀವಗಳೊಂದಿಗೆ ಆಟವಾಡುವ ನಿರ್ಲಕ್ಷ್ಯಕ್ಕೆ ತೆರೆ ಎಳೆಯಬೇಕು — ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ದೇಶದಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ
- ಸಾಸ್ತಾನ ಟೋಲ್ನಲ್ಲಿ ವೀರ ಸೈನಿಕನಿಗೆ ಅವಮಾನ! ತುಳುನಾಡ ರಕ್ಷಣಾ ವೇದಿಕೆ ತೀವ್ರ ಖಂಡನೆ
- ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ ಸ.ಕಿ.ಪ್ರಾ ಶಾಲೆ ಬೆಳ್ಮಾರು
- ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆ. ತುಳುನಾಡ ರಕ್ಷಣಾ ವೇದಿಕೆ ದಶಕಗಳ ಹೋರಾಟದ ಪ್ರತಿಫಲ
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
