ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಕಾರ್ಕಳ: ಪಳ್ಳಿ ಗ್ರಾಮದಲ್ಲಿ ಫಿಶ್ ಮೀಲ್ ಘಟಕ ಸ್ಥಾಪನೆ ವಿರೋಧಿಸಿ ಫೆ.23ರಂದು ಬೃಹತ್ ಪ್ರತಿಭಟನೆ
- ಆಯುಷ್ ವೈದ್ಯರ ವಿರುದ್ಧ ಕ್ರಮ ಕೈಗೊಂಡರೆ ನ್ಯಾಯಾಂಗ ನಿಂದನೆ: ಡಾ. ರವೀಂದ್ರ ಎಚ್ಚರಿಕೆ
- ವಿಟ್ಲ: ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ – ಆರೋಪಿಗೆ ಒಂದು ವರ್ಷದ ಜೈಲು ಶಿಕ್ಷೆ
- Nrithya Sudha (R) Presents Bharatanatyam Rangapravesha of Vidushi Shriya Rao Sannayya
- ಪುತ್ತೂರುದಲ್ಲಿ ಭಾರೀ ದಾಳಿ: ಕೋವಿ ಠೇವಣಾತಿ ಕೇಂದ್ರದಿಂದ 1500ಕ್ಕೂ ಅಧಿಕ ಬಂದೂಕು ಪತ್ತೆ
- ಪುತ್ತೂರು: ಹೈಕೋರ್ಟ್ ನಿರ್ದೇಶನದಂತೆ ಕೋವಿ ಠೇವಣಾತಿ ಕೇಂದ್ರದಲ್ಲಿ ಭಾರೀ ದಾಳಿ – 1500ಕ್ಕೂ ಅಧಿಕ ಬಂದೂಕು ಪತ್ತೆ
- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
