ಮಂಗಳೂರು :- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 24/04/2025ರಂದು ಸಂಭವಿಸುತ್ತಿರುವ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳನ್ನು ಪರಿಹರಿಸಿಕೊಂಡರು. ಆದರೆ ಶೂನ್ಯ ನೆರಳಿನ ವಿದ್ಯಮಾನ ಸಂಭವಿಸುತ್ತಿರುವ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಅದರ ಅನುಭವವನ್ನು ಪಡೆಯಲು ಸಾಧ್ಯವಾಗಲಿಲ್ಲ. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.
ಬೆಂಗಳೂರಿನ ಜವಾಹರ್ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.
ಕೇಂದ್ರದ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು.
Trending
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೆ ಮನವಿ
- ಕಡಬದಲ್ಲಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ಹೂಡಿಕೆ ವಂಚನೆ ಆರೋಪ: ಸಭೆಗೆ ಪೊಲೀಸ್ ದಾಳಿ; ಏಳು ಮಂದಿ ವಿರುದ್ಧ ಪ್ರಕರಣ
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
