Thursday, April 18, 2024
spot_img
More

    Latest Posts

    ಅಮರನಾಥ ಮೇಘ ಸ್ಪೋಟ – ಬಂಟ್ವಾಳದ 30 ಮಂದಿ ಸುರಕ್ಷಿತ

    ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿರುವ ಬಂಟ್ವಾಳದ 30 ಮಂದಿಯ ತಂಡ ಸುರಕ್ಷಿತವಾಗಿದೆ. ಈ ಕುರಿತು ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಂಟ್ವಾಳದ ಯಶೋಧರ ಕರ್ಬೆಟ್ಟು, ಸಂತೋಷ್ ರಾಯಿಬೆಟ್ಟು, ಸುರೇಶ್ ಕೋಟ್ಯಾನ್ ಸಹಿತ ಮೂವತ್ತು ಮಂದಿಯೂ ಸೇಫ್ ಆಗಿ ದರ್ಶನ ಪಡೆದು ಬರುವ ವಿಶ್ವಾಸವನ್ನು ಹೊಂದಿದ್ದಾರೆ.

    ನಾವು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಿಂದ ಬಂದಿದ್ದೇವೆ. ಕೇವಲ 28 ಕಿಲೊ ಮೀಟರ್ ಅಂತರದಲ್ಲಿ ನಾವು ಅಮರನಾಥ ತಲುಪಲಿದ್ದು, ಸೈನ್ಯದ ಸಹಾಯದಿಂದ ನಾವು ನಾಳೆ ಬೆಳಗ್ಗೆ ತಲುಪುವ ನಿರೀಕ್ಷೆಯಲ್ಲಿದ್ದೇವೆ.

    ಇಲ್ಲಿ ಸೈನಿಕರು ನಮ್ಮನ್ನು ಸುರಕ್ಷಿತವಾಗಿಟ್ಟಿದ್ದು, ನಿನ್ನೆ ನಡೆದ ದುರ್ಘಟನೆಯಿಂದ ದೂರದ ಪ್ರದೇಶದಲ್ಲಿ ನಾವಿದ್ದು, ಯಾವುದೇ ಅಪಾಯ ಇಲ್ಲಿಲ್ಲ ಎಂದು ತಂಡದ ಸದಸ್ಯ ಬಿ.ಸಿ.ರೋಡ್ ನರಿಕೊಂಬು ನಿವಾಸಿ ಸುರೇಶ್ ಕೋಟ್ಯಾನ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯ ನಡೆಸುವ ಸೈನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ, ನಾಳೆ ಬೆಳಿಗ್ಗೆ ಅಮರನಾಥ ದಲ್ಲಿ ದರ್ಶನ ಭಾಗ್ಯ ಸಿಗುವ ನಿರೀಕ್ಷೆ ಇದೆ ಎಂದವರು ತಿಳಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss