ಉತ್ತರಕನ್ನಡ : ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಣಶಿ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.
ಕಾರವಾರ-ಜೋಯಿಡಾ ಸಂಚಾರ ಮಾರ್ಗದಲ್ಲಿ ಎರಡು ವಾರ ಭಾರೀ ವಾಹನಗಳಿಗೆ ಸಂಚಾರಕ್ಕೆ ನಿಷೇಧಿಸಲಾಗಿದೆ. ಮಳೆ ಆರ್ಭಟಕ್ಕೆ ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದ್ದು, ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.