ಮಂಗಳೂರು: ತುಳುನಾಡಿನ ದೈವರಾಧನೆ ಹಾಗೂ ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರದ ಅಮೃತಹಳ್ಳಿಯ ಜಕ್ಕೂರು ಮುಖ್ಯ ರಸ್ತೆ ಬಳಿಯ ನಿವಾಸಿ ಶಿವರಾಜ್ ಎಚ್.ಕೆ. (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಈತ ನಕಲಿ ಟ್ವೀಟ್ ಖಾತೆಯಲ್ಲಿ ತುಳುನಾಡಿನ ದೈವರಾಧನೆಯ ಕುರಿತು ನಿಂದನಾತ್ಮಕ ಬರಹಗಳನ್ನು ಹಾಗೂ ಮಹಿಳೆಯರ ಅಶ್ಲೀಲ ಚಿತ್ರಗಳನ್ನು ಟ್ವೀಟ್ ಮಾಡಿದ್ದ ಎನ್ನಲಾಗಿದೆ.
ಈ ಕುರಿತು ತುಳುನಾಡಿನ ದೈವರಾಧನೆ ಸಂರಕ್ಷಣಾ ವೇದಿಕೆಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು.
ಸೆನ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಎಂ. ನೇತೃತ್ವದ ತಂಡವು ಆರೋಪಿಯನ್ನು ಬಂಧಿಸಿದ್ದು, 7ನೇ ಜೆಎಂಎಫ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.