ಉಡುಪಿ: ರೀಲ್ಸ್ ಮಾಡಲು ಹೋಗಿ ಜು.23ರಂದು ಅರಶಿನಗುಂಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಭದ್ರಾವತಿ ಮೂಲದ ಶರತ್ ಶವ ಪತ್ತೆಯಾಗಿದೆ.
ಕೆಲವು ದಿನಗಳ ಹೊಂದೆ ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಬಿದ್ದು ಕೊಚ್ಚಿ ಹೋಗಿದ್ದ ಶರತ್ ಬದುಕಿದ್ದಾನೋ ಇಲ್ಲವೋ ಎಂದು ಕೂಡ ತಿಳಿದು ಬಂದಿರಲಿಲ್ಲ.
ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶರತ್ ಮೃತದೇಹ ಪತ್ತೆಯಾಗಿದೆ.
ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರ ಕಾರ್ಯಾಚರಣೆ ನಡೆಸಿದ್ದರು. ಇದೀಗ ಒಂದು ವಾರದ ಬಳಿಕ ಶರತ್ ಕುಮಾರ್ ಮೃತದೇಹ ಅರಶಿನಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಮೃತದೇಹ ಸಿಕ್ಕಿದೆ.