ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 70,000 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ತೊಕ್ಕೊಟ್ಟಿನ ಪೆರ್ಮನ್ನೂರು ಗ್ರಾಮದ ಅಲೇಕಳ ನಿವಾಸಿ ಮೊಹಮ್ಮದ್ ಇರ್ಷಾದ್(28) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಇರ್ಷಾದ್ ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ 70 ಸಾವಿರ ರೂ ಮೌಲ್ಯದ 12 ಗ್ರಾಂ ನಿಷೇಧಿತ ಎಂಡಿಎಂಎ ಮಾದಕವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ.
©2021 Tulunada Surya | Developed by CuriousLabs