ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.. ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.
Trending
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
