ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Trending
- ಉಡುಪಿ: ಜೆಡಿಎಸ್ ಜಿಲ್ಲಾದ್ಯಕ್ಷ ಕಾಪು ಯೋಗಿಶ್.ವಿ.ಶೆಟ್ಟಿ ಯವರಿಂದ ತುಳುನಾಡ ರಕ್ಷಣಾ ವೇದಿಕೆ (ರಿ.) ಕಾರ್ಮಿಕ ದಿನಾಚರಣೆ ಉದ್ಘಾಟನೆ, ಕಾರ್ಮಿಕರಿಗೆ ಸನ್ಮಾನ
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
