ಕಡಬ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ವೃದ್ಧರೋರ್ವರನ್ನು ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಅರ್ಧ ದಾರಿಯಲ್ಲೇ ಇಳಿಸಿಹೋದ ಘಟನೆ ಇಂದು ಕಡಬದಲ್ಲಿ ನಡೆದಿದೆ.
ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಲ್ಲೇ ಇಳಿಸಿದ್ದಾನೆ ಎನ್ನಲಾಗಿದೆ.
ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು ವೃದ್ಧರು ಮನವಿ ಮಾಡಿಕೊಂಡರಾದರೂ, ಕ್ಯಾರೇ ಎನ್ನದ ಕಂಡಕ್ಟರ್ ಗೋಳಿಯಡ್ಕ ಎಂಬಲ್ಲಿ ಇಳಿಸಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಕಂಡಕ್ಟರ್ ನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Trending
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
- ಉಪ್ಪುರು ಪರಾರಿ ಬೊಬ್ಬರ್ಯ ದೈವಸ್ಥಾನದ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ–ನಿಧಿಕುಂಭ ಸ್ಥಾಪನೆ ವಿಜೃಂಭಣೆ
- ತುಳುಕೂಟದಿಂದ ತುಳು ತಾಳಮದ್ದೊಲಿ ಸಪ್ತಾಹ
