ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅದ್ದೂರಿಯಲ್ಲಿ ನಡೆದ ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ರವರ ರಂಗಪ್ರವೇಶ ಸಮಾರಂಭ
- ದೇರಳಕಟ್ಟೆ ಒಳಚರಂಡಿ ಅವ್ಯವಸ್ಥೆ ಶಾಶ್ವತ ಪರಿಹಾರ ಕಲ್ಪಿಸಿ – ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಆಗ್ರಹ
- ಸಪ್ತಪದಿ ತುಳಿದ ಜನಪ್ರಿಯ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ
- ಸಾಮಾಜಿಕ ಜಾಲತಾಣ ವಿಡಿಯೊ ವೈರಲ್ ವಿಡಿಯೋ ಪ್ರಕರಣ: ಇಬ್ಬರು ಬಂಧನ, 20-30 ಮಂದಿಗೆ ಕಾನೂನು ಕ್ರಮ
- ಸಹಕಾರ ಕ್ಷೇತ್ರದ ಭೀಷ್ಮ, ‘ಸಹಕಾರ ರತ್ನ’ ಎಂದು ಕೀರ್ತಿಸಲ್ಪಡುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಅಂಗವಾಗಿ ಅಭಿವಂದನಾ ಸಮಾರಂಭ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ
- ಮಹಾಕಾಳಿ ಪಡ್ಪು ಅಂಡರ್ ಪಾಸ್ ರಸ್ತೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ನೀರು ನಿಲ್ಲುವುದು, ಮೊಯ್ಲಿಕೆರೆಯ ನೀರು ಸಂಪೂರ್ಣ ಕಲುಷಿತಗೊಂಡಿರುವುದು – ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ
- ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಕ.ರ.ವೇ ಅದ್ಯಕ್ಷ ಹನುಮಂತ ಬೋವಿಯವರ ಆರೋಗ್ಯ ವಿಚಾರಿಸಿದ ತುಳುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು
- Indian Red Cross Society – ದಕ್ಷಿಣ ಕನ್ನಡ ಜಿಲ್ಲಾ ಘಟಕ 2026–29ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಾಂತಾರಾಮ ಶೆಟ್ಟಿ ತಂಡದ ಭರ್ಜರಿ ಗೆಲುವು
