ಉಪ್ಪಿನಂಗಡಿ: ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಕೇಡಿಗಳು ಬೆಂಕಿಹಚ್ಚಿ ನಾಶಪಡಿಸಿದ ಘಟನೆ ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮ, ಬಂಟ್ವಾಳ ನಿವಾಸಿ ಲಿಖಿತ್ ಕುಮಾರ್ ಎಂಬವರು ದಿನಾಂಕ: 06-01-2024 ರಂದು ಹಿರೆಬಂಡಾಡಿ ಗ್ರಾಮದ ಅಡೆಕಲ್ ಮುಳ್ಳುಗುಡ್ಡೆ ಎಂಬಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದು, ರಾತ್ರಿ ವೇಳೆಗೆ ಲಿಖಿತ್ ರ ಭಾವ ಕೀರ್ತನ್ ಎಂಬವರು ಮನೆಯಿಂದ ಹೊರಗೆ ಹೋದಾಗ, ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ, ಮೋಟಾರು ಸೈಕಲ್ವೊಂದು ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಮನೆಯವರಲ್ಲಿ ತಿಳಿಸಿದ ವೇಳೆ, ಮನೆಯಿಂದ ಹೊರಗೆ ಹೋಗಿ ನೋಡಿದಾಗ, ಹೆಂಡತಿಯ ಮನೆಯ ಶೆಡ್ಡ್ನಲ್ಲಿ ನಿಲ್ಲಿಸಿದ್ದ, ಕೆಎ70-ಜೆ-7206 ನೇ ದ್ವಿಚಕ್ರವಾಹವನ್ನು ಯಾರೋ ವ್ಯಕ್ತಿಗಳು ಅಲ್ಲಿಂದ ಕೊಂಡು ಹೋಗಿ, ಮನೆಯಿಂದ 100 ಮೀಟರ್ ದೂರದಲ್ಲಿ ರಸ್ತೆಯಲ್ಲಿ ಬೆಂಕಿಹಚ್ಚಿ ಸುಟ್ಟು ನಾಶಪಡಿಸಿದ್ದು, ಈ ವಾಹನದ ದಾಖಲಾತಿಗಳು ಕೂಡಾ ಇದೇ ವಾಹನದಲ್ಲಿದ್ದು, ಸುಟ್ಟು ಹೋಗಿದ್ದು, ದ್ವಿ ಚಕ್ರ ವಾಹನದ ಅಂದಾಜು ಮೌಲ್ಯ ರೂ 85,000/- ಆಗಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:05/2024 ಕಲಂ: 447.435 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಉಡುಪಿ: ಜೆಡಿಎಸ್ ಜಿಲ್ಲಾದ್ಯಕ್ಷ ಕಾಪು ಯೋಗಿಶ್.ವಿ.ಶೆಟ್ಟಿ ಯವರಿಂದ ತುಳುನಾಡ ರಕ್ಷಣಾ ವೇದಿಕೆ (ರಿ.) ಕಾರ್ಮಿಕ ದಿನಾಚರಣೆ ಉದ್ಘಾಟನೆ, ಕಾರ್ಮಿಕರಿಗೆ ಸನ್ಮಾನ
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
