ಬೆಂಗಳೂರು : ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್ಫೀಲ್ಡ್ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.
Trending
- ಬಿ.ಜೆ.ಎಂ ಮಲ್ಲಾರು-ಮಜೂರು ಜುಮ್ಮಾ ಮಸ್ಜಿದ್ನಲ್ಲಿ ಎಸ್ಐಆರ್ ಮಾಹಿತಿ ಹಾಗೂ ಕಾನೂನು ಜಾಗೃತಿ ಶಿಬಿರ
- ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಗುರುತು ಬಹಿರಂಗ – ತಲೆಮರೆಸಿಕೊಂಡವರ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು
- ರಾಘವ ಗಟ್ಟಿ ದಂಪತಿಗಳ ನೂತನ ವಾಣಿಜ್ಯ ಸಂಕೀರ್ಣ ದುರ್ಗಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆರ್.ಬಿ. ಕಾಂಪ್ಲೆಕ್ಸ್ ಲೋಕಾರ್ಪಣೆ
- ದುರ್ಗಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆರ್.ಬಿ. ಕಾಂಪ್ಲೆಕ್ಸ್ ಲೋಕಾರ್ಪಣೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ,ಮಹಿಳಾ ಜಿಲ್ಲಾ ಘಟಕ ಹಾಗೂ ಬ್ರಹ್ಮಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ
- ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ರಿಗೆ ತುಳುನಾಡ ರಕ್ಷಣಾ ವೇದಿಕೆ – ಆಗ್ರಹ
- ಅತ್ತಾವರದಲ್ಲಿ ಮಾದಕ ವಸ್ತು ಸೇವನೆ: ಇಬ್ಬರು ಯುವಕರು ಪೊಲೀಸ್ ಬಲೆಗೆ
- ಮೂಲ್ಕಿಯಲ್ಲಿ ಬ್ಯಾರಿ ಸಾಹಿತ್ಯ ಪರಿಷತ್ ತಾಲೂಕು ಘಟಕಕ್ಕೆ ಚಾಲನೆ: ಸದಸ್ಯತ್ವ ಅಭಿಯಾನ, ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ

