ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದೆ. 31-12-2023 ರ ಮಧ್ಯಾಹ್ನ ಬೀರುವಿನಲ್ಲಿ ಕಸ್ತೂರಿ ಶೆಟ್ಟಿ 2.05 ಲಕ್ಷ ಹಣ ಇಟ್ಟಿದ್ರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಹಣ ಇರಲಿಲ್ಲ. ಎರಡು ದಿನಗಳ ಕಾಲ ಮನೆಯಲ್ಲೆಲ್ಲ ಹುಡುಕಾಡಿದ್ರೂ ಹಣ ಸಿಕ್ಕಿಲ್ಲ. ಹೀಗಾಗಿ ಜನವರಿ 7ರಂದು ಚಂದ್ರಾ ಲೇಔಟ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀದ್ದಾರೆ. ಕಳೆದ ಆರು ತಿಂಗಳಿಂದ ರತ್ನಮ್ಮ ಎಂಬುವರು ಮನೆ ಕೆಲಸಕ್ಕೆ ಬರ್ತಿದ್ದಾರೆ. ರೂಮ್ಗೆ ರತ್ನಮ್ಮ ಬಿಟ್ಟು ಬೇರೆ ಯಾರೂ ಕೂಡ ಬಂದಿಲ್ಲ. ಮನೆ ಕೆಲಸದಾಕೆ ರತ್ನಮ್ಮಳೇ ಹಣ ಕದ್ದಿರಬಹುದು ಅಂತಾ ಕಸ್ತೂರಿ ದೂರು ನೀಡಿದ್ದಾರೆ. ಸದ್ಯ ಚಂದ್ರಲೇಔಟ್ ಪೊಲೀಸ್ರು ಮನೆ ಕೆಲಸದಾಕೆ ರತ್ನಮ್ಮಳ ವಿಚಾರಣೆ ನಡೆಸುತ್ತಿದ್ದಾರೆ.
Trending
- ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ
- ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ – ಐದು ದಿನಗಳ ಬಿಹಾರ್–ಜಾರ್ಖಂಡ್ ತೀರ್ಥಯಾತ್ರೆ
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
