Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ

    9 May 2025

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    9 May 2025

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025
    Facebook WhatsApp Telegram
    Trending
    • ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ
    • ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು ವಿಶ್ವವಿದ್ಯಾನಿಲಯ:ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಆಗ್ರಹ

    ಮಂಗಳೂರು ವಿಶ್ವವಿದ್ಯಾನಿಲಯ:ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಆಗ್ರಹ

    Tulunada SuryaBy Tulunada Surya5 March 2024Updated:11 November 2024 ಇತರೆ No Comments1 Min Read
    Share
    Facebook WhatsApp
    Share on:

    ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯವು ಹಲವು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆ ಎದುರಿಸುತ್ತಿದೆ ಎಂದು ವರದಿಯಾಗಿವೆ ಹಾಗಾಗಿ ವಿವಿಯ ಆರ್ಥಿಕ ಶ್ವೇತಪತ್ರ ಬಿಡುಗಡೆಗೊಳಿಸಬೇಕು ಎಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್. ಹರೀಶ್ ಆಚಾರ್ಯ ಮನವಿ ಮಾಡಿದ್ದಾರೆ.

    ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಒತ್ತಾಯಿಸಿದ್ದಾರೆ. ಹಾಗೆಯೇ ಹಳಿ ತಪ್ಪಿರುವ ವಿಶ್ವವಿದ್ಯಾನಿಲಯದ ಅರ್ಥಿಕ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ದೃಷ್ಟಿಯಿಂದ ರಾಜ್ಯ ಸರಕಾರವು ಮಧ್ಯ ಪ್ರವೇಶಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ

    ಮಂಗಳೂರು ವಿಶ್ವವಿದ್ಯಾನಿಲಯಾದಿಂದ ನೇಮಕಾತಿಗೊಂಡು ಕೊಡಗು ವಿಶ್ವ ವಿದ್ಯಾನಿಲಯ ಚಿಕ್ಕಲವಾರ ಹಾಗೂ ಆದರ ಘಟಕ ಫೀಲ್ಡ್ ಮಾರ್ಷಲ್ ಕಾವೇರಿಯಪ್ಪ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳುಗಳಿಂದ ವೇತನವಾಗಿರುವುದಿಲ್ಲ. ವಿವಿಯ ಮಂಗಳ ಗಂಗೋತ್ರಿ ಹಾಗೂ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿಯ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೂ ವಿವಿಯು ವೇತನ ಪಾವತಿ ಮಾಡಲಾಗದೆ ಹತಾಶವಾಗಿದೆ. ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕರು ಕಳೆದ ಐದಾರು ದಿನಗಳಿಂದ ಪ್ರತಿಭಟನಾ ನಿರತರಾಗಿದ್ದು ಅನ್ನ ಸತ್ಯಾಗ್ರಹದ ನಿರಶನಕ್ಕೆ ಮುಂದಾಗಿದ್ದಾರೆ. ಬೇರೆ ಬೇರೆ ಘಟಕ ಕಾಲೇಜುಗಳ ಸಿಬ್ಬಂದಿಗಳೂ ಸತ್ಯಾಗ್ರಹದ ತಯಾರಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಸಿಬ್ಬಂದಿಗಳು ಮಾತ್ರವಲ್ಲದೇ ಸಾರ್ವಜನಿಕರೂ ವಿವಿಯ ಬಗ್ಗೆ ಹತಾಶರಾಗಿದ್ದಾರೆ ಎಂದು ಹರೀಶ್ ಆಚಾರ್ಯ ಅವರು ಹೇಳಿದ್ದಾರೆ

    Share on:

    Keep Reading

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.