ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಸಭೆ ಜಯ ಪೂಜಾರಿ ಲಕ್ಷ್ಮಿ ನಗರ ರವರ ಅಧ್ಯಕ್ಷತೆಯಲ್ಲಿ ದಿನಾಂಕ 10-11-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು . ಸಭೆಯಲ್ಲಿ ಕಾರ್ಮಿಕ ಘಟಕ ಬಲಪಡಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು, ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಹಲವಾರು ಪ್ರಮುಖ ವಿಷಯಗಳ ಬಗ್ಗೆ ಕಾರ್ಮಿಕ ಘಟಕ ಜಿಲ್ಲಾ ಪದಾಧಿಕಾರಿಗಳ ಗಮನಸೆಳೆದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ , ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ ಸುಶೀಲಾ ಜ್ಯೋತಿ ಸಾಸ್ತಾನ , ಲಕ್ಷ್ಮೀಬಾಯಿ ರವಿಜಾ ಶ್ಯಾಮಲ ನಿರ್ಮಲ ಸುಶೀಲ ನಂದನ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಸಂಘಟನೆಗೆ ಸೇರ್ಪಡೆಗೊಂಡರು, ಅವರನ್ನು ಶಾಲು ಹಾಕಿ ಸಂಘಟನೆ ಬರಮಾಡಿಕೊಳ್ಳಲಾಯಿತು.
Trending
- ತಾಳಿಪಾಡಿ ರಾಜಕಾಲುವೆಗೆ ₹30 ಲಕ್ಷದ ತಡೆಗೋಡೆ ಕಾಮಗಾರಿಗೆ ಚಾಲನೆ , ಕೃತಕ ನೆರೆ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ವೇದವ್ಯಾಸ ಕಾಮತ್
- ಒಡ್ಡೂರು ಪಾರ್ಮ್ಸ್ನಲ್ಲಿ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನಕ್ಕೆ ಚಾಲನೆ : ಕಾರ್ಯಕರ್ತರ ರೂಪುಗೊಳಿಸುವಲ್ಲಿ ಇಂತಹ ವರ್ಗಗಳ ಪಾತ್ರ ಮಹತ್ವದ್ದು : ಬ್ರಿಜೇಶ್ ಚೌಟ
- ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಪ್ರಶಿಕ್ಷಣ ಮಹಾಭಿಯಾನ ಸಮಾರೋಪ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ” — ನಳಿನ್ ಕುಮಾರ್ ಕಟೀಲ್
- ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ
- ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಜೆಡಿಎಸ್ ಸುಳ್ಯ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಭೇಟಿ ಸಂಘಟನಾ ವಿಚಾರಗಳ ಕುರಿತು ಸಂವಾದ
- ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ : ಪೊಲೀಸರ ದಾಳಿ, ಇಬ್ಬರ ವಿರುದ್ಧ ಪ್ರಕರಣ
- ಚಾಮರಾಜನಗರದಲ್ಲಿ ಮನಕಲಕುವ ದುರಂತ ಮಲೆ ಮಾದೇಶ್ವರ ಬೆಟ್ಟದ ಸಮೀಪ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನಿಧನ.

