ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ ಗಣ್ಯರ ಸಂತಾಪ
- ಹೊಸ ಪಡಿತರ ಚೀಟಿ ವಿತರಣೆಗೆ ಆಗ್ರಹಿಸಿ ಸಚಿವರಿಗೆ ಜೆಡಿಎಸ್ ನಿಯೋಗದಿಂದ ಮನವಿ ಸಲ್ಲಿಕೆ
- ಉದ್ಯಾವರ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ; ಮೃತದೇಹ ಪತ್ತೆ
- ಸರ್ಕಾರಿ ಆಸ್ಪತ್ರೆಗಳಲ್ಲಿ ದಲ್ಲಾಳಿಗಳಿಗೆ ಬ್ರೇಕ್: ಆರೋಗ್ಯ ಸಚಿವರಿಂದ 24×7 ನೇರ ಸಹಾಯವಾಣಿ ಘೋಷಣೆ
- ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
- NEET ಪರೀಕ್ಷಾ ವ್ಯವಸ್ಥೆಯ ಅಮಾನವೀಯ ಧೋರಣೆ ಖಂಡನೀಯ: ತುಳುನಾಡ ರಕ್ಷಣಾ ವೇದಿಕೆ
- ಉಡುಪಿ ಸಂತೆಕಟ್ಟೆ: ಅಕ್ರಮ ದತ್ತು ಪ್ರಕರಣ ಬೆಳಕಿಗೆ: ವೈದ್ಯ ಸೇರಿದಂತೆ ಇಬ್ಬರ ಬಂಧನ
- ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ: ಬಡವರ ಮೇಲೆಯೇ ಕಾನೂನು ಯಾಕೆ? – ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ರಾಜ್ಯ ಸಂಚಾಲಕ ಪ್ರಶಾಂತ್ ಭಟ್ ಕಡಬ ಪ್ರಶ್ನೆ

