ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ
- ಕುಂದಾಪುರ: ತುಳುನಾಡ ರಕ್ಷಣಾ ವೇದಿಕೆಯಿಂದ ರಾಷ್ಟ್ರಪತಿ ಸೇವಾ ಪದಕ ಪಡೆದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿರವರಿಗೆ ಸನ್ಮಾನ
- ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!
- ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಪ್ರಧಾನ ಸಂಪಾದಕ ಎಸ್ ಆರ್. ಬಂಡಿಮಾರ್ ಅಸ್ತಂಗತ. ಜ. 31 ಮದ್ಯಾಹ್ನ ನಂತರ ಅಂತಿಮ ಸಂಸ್ಕಾರ
- ಅದ್ದೂರಿಯಾಗಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭ