Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025
    Facebook WhatsApp Telegram
    Trending
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ

    ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ

    Tulunada SuryaBy Tulunada Surya17 January 2025 ತಂತ್ರಜ್ಞಾನ No Comments1 Min Read
    Share
    Facebook WhatsApp
    Share on:

    ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಕೋಸ್ಟಲ್‌ವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರ ಗೋಲ್ಡನ್ ಮೂವೀಸ್ ಸಂಸ್ಥೆ ತುಳು ಸಿನೆಮಾ ಇಂಡಸ್ಟ್ರಿಗೆ ಕಾಲಿಟ್ಟಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಈ ಪ್ರೊಡಕ್ಷನ್‌ನ ಮೊದಲ ತುಳು ಸಿನಿಮಾ ಪ್ರೊಡಕ್ಷನ್ ನಂ 1ಗೆ ಮುಹೂರ್ತ ನೆರವೇರಿಸಲಾಗಿದೆ.

    ಉದ್ಯಮಿ ಎಂ ಆರ್ ಜಿ ಗ್ರೂಪ್‌ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಮೊದಲ ಕ್ಲ್ಯಾಪ್‌ ಮಾಡಿದ್ದು, ಕುದ್ರೋಳಿ ಕ್ಷೇತ್ರದ ನವ ನಿರ್ಮಾಣದ ರೂವಾರಿ ಜನಾರ್ದನ ಪೂಜಾರಿ ಅವರ ಆಶೀರ್ವಾದೊಂದಿಗೆ ನಟ ಗಣೇಶ್ ಕ್ಯಾಮೆರಾ ರೋಲ್ ಮಾಡಿದ್ದಾರೆ.

    ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉದ್ಯಮಿ ರೋಹನ್ ಮೊಂತೆರೋ, ಲೀಲಾಕ್ಷ ಕರ್ಕೇರ , ತುಳು ಸಿನೆಮಾದ ಕಲಾವಿದರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ನಟ ಗಣೇಶ್ , ನಾಲ್ಕು ವರ್ಷದ ಹಿಂದೆ ಮಂಗಳೂರಿಗೆ ಬಂದಾಗ ತುಳು ಸಿನೆಮಾ ಮಾಡಬೇಕು ಅಂತ ಯೋಚನೆ ಬಂದಿತ್ತು. ಉತ್ತಮ ಕಥೆಗಾಗಿ ಕಾಯುತ್ತಿದ್ದು, ಈಗ ಅಂತಹ ಒಂದು ಉತ್ತಮ ಕಥೆ ಸಿಕ್ಕಿದೆ. ಹೀಗಾಗಿ ಶಿಲ್ಪಾ ಈ ಸಿನೆಮಾ ಮಾಡಲು ಮುಂದಾಗಿದ್ದಾಳೆ. ನನ್ನ ನಂಟು ತುಳುನಾಡಿನ ಜೊತೆ ಜಾಸ್ತಿ ಇದ್ದ ಕಾರಣ ಅವಕಾಶ ಸಿಕ್ಕರೆ ಈ ಸಿನೆಮಾದಲ್ಲಿ ಹಾಡಿನ ಸೀನ್‌ನಲ್ಲಾದ್ರೂ ಕಾಣಸಿಕೊಳ್ಳುವುದಾಗಿ ಹೇಳಿದ್ದಾರೆ.

    ಪ್ರೊಡಕ್ಷನ್ ನಂಬರ್ 1 ಸಿನಿಮಾ ತುಳುನಾಡಿನ ಸೊಗಡಿನೊಂದಿಗೆ ಸುಂದರ ಸಾಂಸಾರಿಕ ಕಥೆಯನ್ನು ಹೊಂದಿರುವ ಸಿನೆಮಾವಾಗಿದ್ದು, ನಾಯಕ ನಟನಾಗಿ ನಿತ್ಯ ಪ್ರಕಾಶ್ ಬಂಟ್ವಾಳ ಅವರು ಮೊದಲ ಬಾರಿಗೆ ಸಿನೆಮಾಗೆ ಎಂಟ್ರಿ ಕೊಟ್ಟಿದ್ದು, ಅಮೃತಾ ನಾಯಕ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

    Share on:
    Golden ganesh Harikrishna bantwal Kudroli Nithya prakash Production no1 Shilpa ganesh Tulu cinema Tulunada surya

    Keep Reading

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.