ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ
ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

