ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಡಾ .ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಮಾತನಾಡಿದರು
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

