ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಕರ್ತರ ಸಭೆ ಇತ್ತೀಚೆಗೆ ನಡೆದಿದ್ದು ನಿಷ್ಠಾವಂತ ಸಕ್ರಿಯ ಕಾರ್ಯಕರ್ತ ಅನಿಲ್ ಪೂಜಾರಿ ರವರನ್ನು ತುಳುನಾಡ ರಕ್ಷಣಾ ವೇದಿಕೆಯ ಗೌರವಾನ್ವಿತ ಹುದ್ದೆಯಾದ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಈ ಕೂಡಲೇ ಜಾರಿಗೆ ಬರುವಂತೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ನೇಮಕ ಆದೇಶ ಹೊರಡಿಸಿರುತ್ತಾರೆ. ಆಯ್ಕೆಯಾದ ಅನಿಲ್ ಪೂಜಾರಿ ರವರನ್ನು ಹೂಗುಚ್ಛ ನೀಡಿ ಯೋಗೀಶ್ ಶೆಟ್ಟಿ ಜಪ್ಪು ರವರು ಗೌರವಿಸಿರುತ್ತಾರೆ.
ಈ ಸಂದರ್ಭದಲ್ಲಿಊ ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್ ,ಕಾರ್ಮಿಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ, ಜಿಲ್ಲಾ ಯುವ ಘಟಕ ಅಧ್ಯಕ್ಷ ವೇಣು ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ ಪೂಜಾರಿ, ಬ್ರಹ್ಮವರ ಘಟಕ ಅಧ್ಯಕ್ಷ ಸತೀಶ್ ಪೂಜಾರಿ ಕೀಳಿಂಜೆ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ನಾಗಲಕ್ಷ್ಮಿ, ಜಿಲ್ಲಾ ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ, ಅವಿನಾಶ್ ಮಾಸ್ಟರ್ , ಸಲಾವುದ್ದೀನ್ ಮತ್ತಿತರ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರದ ಮತ್ತು ಜಿಲ್ಲಾ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾಗಿದೆ. ದೇಶ ವಿದೇಶಗಳಲ್ಲಿ ಹಲವಾರು ಕಾರ್ಯಕರ್ತರ ಹೊಂದಿರುವ ಬಲಿಷ್ಠ ಸಂಘಟನೆಯಾಗಿದೆ.
©2021 Tulunada Surya | Developed by CuriousLabs