Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಬೈಕ್ ಸವಾರನ ಕೊಲೆ ಯತ್ನ , ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆಯಲ್ಲಿ ನೇತಾಡಿಕೊಂಡ ಪಾದಚಾರಿ ಮಹಿಳೆ

    ಮಂಗಳೂರು : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಬೈಕ್ ಸವಾರನ ಕೊಲೆ ಯತ್ನ , ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆಯಲ್ಲಿ ನೇತಾಡಿಕೊಂಡ ಪಾದಚಾರಿ ಮಹಿಳೆ

    Tulunada SuryaBy Tulunada Surya13 March 2025Updated:13 March 2025 ಅಪರಾಧ No Comments1 Min Read
    Share
    Facebook WhatsApp
    Share on:

    ಮಂಗಳೂರು : ಮಂಗಳೂರಿನ ಬಿಜೈ ಬಳಿ ಭೀಕರ ಅಪಘಾತದ ಮೂಲಕ ಕೊಲೆ ಯತ್ನ ನಡೆದಿದೆ. ಸತೀಶ್ ಕುಮಾರ್.ಕೆ.ಎಂ ಎಂಬವರು ನಿವೃತ್ತ ಬಿ.ಎಸ್.ಎನ್.ಎಲ್ ಉದ್ಯೋಗಿಯಾಗಿದ್ದು, ಮುರಳಿ ಪ್ರಸಾದರವರು ಇವರ ಎದುರು ಮನೆಯ ನಿವಾಸಿಯಾಗಿರುತ್ತಾರೆ. ಸತೀಶ್ ಕುಮಾರ್.ಕೆ.ಎಂ ರವರಿಗೆ ಮುರಳಿ ಪ್ರಸಾದ್ ಹಾಗೂ ಅವರ ಮನೆಯವರೊಂದಿಗೆ ಮೊದಲಿನಿಂದಲು ಸದಾಕಾಲ ತಂಟೆ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು, ಈ ಹಿಂದೆ ಮುರಳಿ ಪ್ರಸಾದ ತಂದೆಯವರು ನಡೆದುಕೊಂಡು ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬಾತನು ಕಾರಣ ವಿಲ್ಲದೆ ಬೈಕ್ನಲ್ಲಿ ಬಂದು ತಾಗಿಸಿಕೊಂಡು ಹೋಗಿ ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಈ ಬಗ್ಗೆ ಉರ್ವಾ ಠಾಣೆಯಲ್ಲಿ 2023 ರಲ್ಲಿ ದೂರು ದಾಖಲಾಗಿರುತ್ತದೆ.

    ಇಂದು ಬಿಜೈ ಕಾಪಿಕಾಡ್ನ 6 ನೇ ಮುಖ್ಯ ರಸ್ತೆಯಲ್ಲಿ ಮುರಳಿ ಪ್ರಸಾದ ರವರು ತನ್ನ ಮೋಟಾರ್ ಸೈಕಲ್ ನಲ್ಲಿ ಮನೆಯಿಂದ ಹೋಗುತ್ತಿರುವಾಗ ಆರೋಪಿತ ಸತೀಶ್ ಕುಮಾರ್.ಕೆ.ಎಂ ಅವರ ಕಾರಿನಲ್ಲಿ ಕಾದು ಕುಳಿತು ಉದ್ದೇಶ ಪೂರ್ವಕವಾಗಿ ಮುರಳಿ ಪ್ರಸಾದರವರನ್ನು ಕೊಲೆಮಾಡುವ ಉದ್ದೇಶದಿಂದ ಕಾರನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕಿಗೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ನಡೆದುಕೊಂಡು ಹೋಗುತ್ತಿದ್ದ ಹೆಂಗಸಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಪಕ್ಕದ ಕಾಂಪೌಂಡ್ ಗೋಡೆಯಲ್ಲಿ ನೇತಾಡಿಕೊಂಡ ಸ್ಥಿತಿಯಲ್ಲಿ ಇದ್ದ ಪಾದಚಾರಿ ಮಹಿಳೆಯನ್ನು ಸಾರ್ವಜನಿಕರು ಕಾಂಪೌಂಡ್ ಗೋಡೆಯಿಂದ ಕೆಳಗೆ ಇಳಿಸಿದರು. ಮುರಳಿ ಪ್ರಸಾದ ರವರಿಗೆ ಗಾಯಗಳು ಉಂಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿತ ಸತೀಶ್ ಕುಮಾರ್.ಕೆ.ಎಂ ರವರನ್ನು ವಶಕ್ಕೆ ಪಡೆದುಕೊಂಡು ಕಾರನ್ನು ಸ್ವಾಧೀನಪಡಿಸಲಾಗಿದೆ.ಆರೋಪಿತ ಸತೀಶ್ ಕುಮಾರ್.ಕೆ.ಎಂ ಎಂಬವರು ಉದ್ದೇಶ ಪೂರ್ವಕವಾಗಿ ಪೂರ್ವ ದ್ವೇಷದಿಂದ ಕೊಲೆಮಾಡುವ ಉದ್ದೇಶದಿಂದ ಈ ಕೃತ್ಯವೆಸಗಿದ್ದ ಆರೋಪದಲ್ಲಿ ಈ ಬಗ್ಗೆ ನಗರದ ಉರ್ವಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು ಹಾಗೂ ಕಾರನ್ನು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿ ಹೆಂಗಸಿಗೆ ಡಿಕ್ಕಿಯಾದ ಕುರಿತು ಮಂಗಳೂರು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ಆರೋಪಿಯ ವಿರುದ್ದ ದಾಖಲಾಗಿದ್ದು ಪ್ರಕರಣದ ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳು ಮುಂದಿನ ತನಿಖೆಯಲ್ಲಿ ತಿಳಿದು ಬರಲಿದೆ.

    Share on:
    Tulunada surya ತುಳುನಾಡ ಸೂರ್ಯ

    Keep Reading

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.