ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರಗಾಮಿ ದಾಳಿ ಮಾನವೀಯತೆಯ ಮೇಲೆ ನಡೆದ ಘೋರ ದಾಳಿಯಾಗಿದೆ. ತುಳುನಾಡ ರಕ್ಷಣಾ ವೇದಿಕೆ ಇದನ್ನು ತೀವ್ರ ಕಠಿಣವಾಗಿ ಖಂಡಿಸುತ್ತದೆ.
*ಕಾಶ್ಮೀರ ಕಣಿವೆ ಸಹಜತೆಗೆ ಮರಳಿದೆ ಎಂಬ ಧೈರ್ಯ ವಿಶ್ವಾಸ ಹೆಚ್ಚಾಗುತ್ತಿರುವ ಮಧ್ಯೆಯೇ ಈ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ನಿಸ್ಸಹಾಯಕ ಮಹಿಳೆ ಮತ್ತು ಮಕ್ಕಳೆದುರು ಅವರ ತಂದೆಯನ್ನು , ಪತ್ನಿ ಮುಂದೆ ಗಂಡಂದಿರನ್ನು ಕೊಲ್ಲುವವರು ಮನುಷ್ಯರೇ ಅಲ್ಲ.
ಕಾಶ್ಮೀರದಲ್ಲಿ ಪ್ರವಾಸೋದ್ಯಮ ನಂಬಿ ಬದುಕುವ ಜನರು ಇಂತಹ ಘಟನೆಯಿಂದ ಕಂಗಾಲಾಗಿದ್ದಾರೆ. ಬದುಕಿನ ಕೆಲ ದಿನಗಳನ್ನು ಸಂತೋಷ ಮೋಜು ಮಾಡಲು ದೇಶ ವಿದೇಶಗಳಿಂದ ಬರುವ ಭೂಲೋಕದ ಸ್ವರ್ಗ ಎಂಬ ಖ್ಯಾತಿಯ ಕಾಶ್ಮೀರದಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೇಂದ್ರ ಸರಕಾರ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಆಗ್ರಹಿಸಿದರು ಎಂದು ತುಳುನಾಡ ರಕ್ಷಣಾ ವೇದಿಕೆ ಪ್ರಕಟನೆ ತಿಳಿಸಿದೆ
Trending
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
- ಬಾವುಟ ಗುಡ್ಡ : ಎಪ್ರಿಲ್ 5 ರಂದು ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.)ವತಿಯಿಂದ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆ.
- ಹಾಸನದಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು – ಲಾಡ್ಜ್ ಮೇಲೆ ಪೊಲೀಸರ ದಾಳಿ, ವಿದೇಶಿ ಮಹಿಳೆಯರ ರಕ್ಷಣೆ
- ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ಗೆ ಇಬ್ಬರು ಪ್ರಮುಖ ಮುಖಂಡರ ಸೇರ್ಪಡೆ
- ಆಯಿಷತ್ ಲುತ್ಫಾ ನಜಾ ಕೆ.ಎ. ಅವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್
- ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓಬಿಸಿ ಮೋರ್ಚಾ ಜಿಲ್ಲಾ ಪದಾಧಿಕಾರಿಗಳನ್ನಾಗಿ ನಿಯುಕ್ತಿ.
- ತುಳುಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಅಧ್ಯಯನ ಸಮಿತಿ ವರದಿ ಸಲ್ಲಿಕೆ
- ತುಳು ಕೂಟ (ರಿ.), ಕುಡ್ಲ ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ

