Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು : ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ , ಹತ್ಯೆ ಪ್ರಕರಣ 15 ಆರೋಪಿಗಳು ಪೊಲೀಸ್ ವಶಕ್ಕೆ…!!

    ಮಂಗಳೂರು : ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ , ಹತ್ಯೆ ಪ್ರಕರಣ 15 ಆರೋಪಿಗಳು ಪೊಲೀಸ್ ವಶಕ್ಕೆ…!!

    Tulunada SuryaBy Tulunada Surya29 April 2025Updated:29 April 2025 ಅಪರಾಧ No Comments2 Mins Read
    Share
    Facebook WhatsApp
    Share on:

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

    ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

    ರವಿವಾರ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅನುಮಾನದ ಆಧಾರದಲ್ಲಿ ಸೋಮವಾರ ಶವಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪ್ರಾಥಮಿಕ ವರದಿ ಪ್ರಕಾರ ಮೃತರ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮರಣ ಸಂಭವಿಸಿರುವುದು ಕಂಡು ಬಂದಿದೆ.

    ಈವರೆಗಿನ ತನಿಖೆಯಲ್ಲಿ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭ ಅಪರಿಚಿತ ವ್ಯಕ್ತಿಗೆ ಯಾವುದೋ ಮಾತಿಗೆ ಸಂಬಂಧಿಸಿ ಸಚಿನ್ ಟಿ. ಎಂಬಾತ ಜಗಳಕ್ಕೆ ಮುಂದಾದಾಗ ಸಹಚರರು ಕೂಡಾ ಜತೆ ಸೇರಿ ಹಲ್ಲೆ ನಡೆಸಿದ್ದಾರೆ. ಆತ ಓಡಿಹೋಗಲು ಯತ್ನಿಸಿದಾಗ ಸುಮಾರು 30 ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ.

    ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದರು. ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಪೊಲೀಸ್ ಕಮಿಷನರ್ ಹೇಳಿದರು.

    ದೀಪಕ್ ಕುಮಾರ್ ಎಂಬವರು 19 ಜನರು ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 37/2025, ಕಲಂ 102 (2), 189 (2),191 (1), 191(3), 240 ಭಾರತೀಯ ನ್ಯಾಯ ಸಂಹಿತೆ 2023 (ಬಿಎನ್‌ಎಸ್ 2023) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಥಮ ಬಾರಿಗೆ ಕಾನೂನಿನಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆತ ಉತ್ತರಭಾರತ ಮೂಲದ ಕಾರ್ಮಿಕ ಎಂದು ಹೇಳಲಾಗಿದ್ದರೂ ಆತ ಮಲಯಾಳಂ ಮಾತನಾಡುತ್ತಿದ್ದ ಎನ್ನಲಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

    ಗೋಷ್ಟಿಯಲ್ಲಿ ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್, ರವಿಶಂಕರ್ ಉಪಸ್ಥಿತರಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.

    Share on:
    Kudupu kole Mangalore Police Tulunada surya ತುಳುನಾಡ ಸೂರ್ಯ

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.