ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು ಕನ್ನಡ ಸಂಘ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಹಕಾರದೊಂದಿಗೆ ಭಗವಾನ್ ಬುದ್ಧ ಜಯಂತಿ ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿ.ವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ ಉದ್ಘಾಟಿಸಿ ಮಾತನಾಡಿದರು. ಬುದ್ಧ ಕೇವಲ ವ್ಯಕ್ತಿಯಲ್ಲ ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು. ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಬಯಸುತ್ತಾನೆ. ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ ಎಷ್ಟು ಶ್ರೀಮಂತನಾಗಿದ್ದರೂ ಜೀವನದಲ್ಲಿ ದುಃಖವಿಲ್ಲದವನು ಯಾರು ಇಲ್ಲ ಎಂದು ಗೌತಮ ಬುದ್ಧ ಹೇಳುತ್ತಾರೆ. ಹಾಗಾಗಿ ದುಃಖದಿಂದ ಹೊರಬರುವ ಮಾರ್ಗವನ್ನು ಕಂಡುಹಿಡಿಯುತ್ತಾರೆ. ಬುದ್ಧನ ಪ್ರಕಾರ ಮನುಷ್ಯನ ಅತಿಯಾದ ಆಸೆಗಳೇ ದುಃಖಕ್ಕೆ ಮೂಲ ಕಾರಣ. ಒಬ್ಬ ವ್ಯಕ್ತಿಯು ತನಗೆ ಅಗತ್ಯಕ್ಕಿಂತ ಹೆಚ್ಚಿನದನ್ನು ಬಯಸಬಾರದು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾಧವ. ಕೆ ವಂದಿಸಿದರು.
Trending
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ
- ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ
- ಬಿಜೈ ಮಸಾಜ್ ಪಾರ್ಲರಿನಲ್ಲಿ ಅಕ್ರಮ ಚಟುವಟಿಕೆ ; ದಾಳಿ ನಡೆಸಿ ಟ್ರೇಡ್ ಲೈಸನ್ಸ್ ರದ್ದುಪಡಿಸಿದ ಪೊಲೀಸರು