ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.
ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ ಮೊಬೈಲ್ ನಂಬರ್ 9364062517, ಕಚೇರಿ ದೂರವಾಣಿ ಸಂಖ್ಯೆ 08242950997 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ
Trending
- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
