ರಾಷ್ಟ್ರೀಯ ವೈದ್ಯರ ದಿನಾಚರಣೆಯ ರಾಷ್ಟ್ರ ಪುರಸ್ಕಾರ ಡಾ ಕುಲಾಲ್ ಅವರಿಗೆ
ನೂರು ವರ್ಷಗಳ ಸಂಭ್ರಮದ ಹೊಸ್ತಿಲಲ್ಲಿ ಇರುವ ಭಾರತೀಯ ವೈದ್ಯಕೀಯ ಸಂಘ ತನ್ನ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಸಮುದಾಯ ಸೇವಾ ಪುರಸ್ಕಾರಕ್ಕೆ
ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಇವರನ್ನ ಆಯ್ಕೆಮಾಡಿದ್ದು
ಅವರ ಒಡನಾಟದಲ್ಲಿ ಇರುವ ಕರಾವಳಿ ಮಲೆನಾಡು ಹಾಗು ರಾಜ್ಯದ ಎಲ್ಲಾ ವರ್ಗಗಳ ಹಿತೈಷಿಗಳಿಗೆ ಹೆಮ್ಮೆಯ ವಿಚಾರ
ಸಮಾಜ ಮುಖಿ ವೈದ್ಯಕೀಯ ಸೇವೆ, ವೈದ್ಯಕೀಯ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಸಿಡಿಲಬ್ಬರದ ಸಂಘಟಕ, ನೇರ ಮಿಂಚಿನ ಮಾತು, ದಿಟ್ಟ ಸ್ಪಷ್ಟ ಬರಹ, ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಟ ಮಾಡಬಲ್ಲ ವೈದ್ಯ ಎಂಬ ಖ್ಯಾತಿಯ ಡಾ ಕುಲಾಲ್, ಐಎಂಎ, ಕುಟುಂಬ ವೈದ್ಯರ ಸಂಘ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಕನ್ನಡಕಟ್ಟೆ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ವೈದ್ಯ ಬರಹಗಾರರ ಬಳಗ, ಯುವ ವೇದಿಕೆ ಸಹಿತ ನೂರಾರು ಸಂಘಟನೆಗಳ ಜೊತೆ ಸದ್ದಿಲ್ಲದೇ ದುಡಿಯುತ್ತಾ, ತನು ಮನ ಧನಗಳ ಸಹಕಾರ ನೀಡುತ್ತಾ, ಮುಗುಳ್ನಗುತ್ತಾ ಸದ್ದಿಲ್ಲದೇ ಸುದ್ದಿಯಾದವರು. ನಾಡಿನ ಶ್ರೇಷ್ಠ ಪುರಸ್ಕಾರ ವಾದ ದೇವರಾಜ ಅರಸು ಪುರಸ್ಕಾರ, ರಾಜ್ಯ
ಐಎಂಎ ರಾಜ್ಯ ಡಾ ಬಿ ಸಿ ರಾಯ್ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಹೊಯ್ಸಳ ಪುರಸ್ಕಾರ, ಅಂತರಾಷ್ಟ್ರೀಯ ಆರ್ಯಭಟ ಪುರಸ್ಕಾರ, ಮಂಗಳೂರು ಐಎಂಎ ಯಿಂದ ಜೀವ ಮಾನ ಸಾಧನ ಪುರಸ್ಕಾರ ಸಹಿತ ನೂರಾರು ಗೌರವ ಪಡೆದಿರುವ ಇವರು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಡಾ ಬಿ ಸಿ ರಾಯ್ ರಾಷ್ಟ್ರ ಪುರಸ್ಕಾರವನ್ನ ಹೊಸದೆಹಲಿಯಲ್ಲಿ ಜುಲೈ ೧೩ ರಂದು ಕೇಂದ್ರಸರಕಾರದ ಪ್ರತಿನಿಧಿ ಯವರ ಉಪಸ್ಥಿತಿ ಯಲ್ಲಿ ರಾಷ್ಟ್ರೀಯ ಐಎಂಎ ನಾಯಕರ ಕೈಯಿಂದ ಸ್ವೀಕರಿಸಲಿದ್ದಾರೆ ಎಂಬುದೇ ಅವರ ಹಿತೈಷಿ ಮಿತ್ರರುಗಳಿಗೆ ಹೆಮ್ಮೆ. ವೈದ್ಯಕೀಯ ವೃತ್ತಿ ಯಲ್ಲಿ ಜೀವ ಮಾನದ ಸಾಧನೆಗೆ ಪಡೆಯುವ ಈ ಪುರಸ್ಕಾರಕ್ಕೆ ಭಾಜನಾಗುವ ಬೆರಳೆಣಿಕೆಯಷ್ಟು ಮಂದಿಯಲ್ಲಿ ಡಾ ಕುಲಾಲ್ ಅತಿ ಕಿರಿಯ ವಯಸ್ಸಿನ ಸಾಧಕರು.
Trending
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು
- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ

