ದಿನಾಂಕ ಜೂನ್ 18-2025ರಂದು ಪ್ರವೀಣ ಎಂಬ 29 ವರ್ಷ ಪ್ರಾಯದ ಯುವಕನಿಗೆ ಬೆಳಿಗ್ಗೆ ಏಳು ಗಂಟೆಯಿಂದ ಫ್ಯಾಕ್ಟರಿಗೆ ಹೋದಾಗ ಅಲ್ಲಿನ
ಹೆಚ್ ಎ ಆರ್ ಚಂದ್ರಶೇಖರ್ ಎಂಬವರು ಪ್ರವೀಣನನ್ನು ಗೇಟಿನ ಒಳಗೆ ಬಾರದಂತೆ ತಡೆದು ಏರುದನಿಯಿಂದ ಬೆದರಿಸಿ ಬೈಕ್ ಅನ್ನು ತಡೆದು ನಿಲ್ಲಿಸಿ ಫ್ಯಾಕ್ಟರಿ ಮಾಲೀಕ ಸಂಪತ್ ಶೆಟ್ಟಿ ಬರುವವರೆಗೆ ನಿನ್ನನ್ನು ಒಳಗೆ ಬಿಡಬಾರದು ಎಂದು ಹೇಳಿದ್ದಾರೆ ಎಂದು ಗದರಿಸಿ ಅವನ ಬೈಕ್ ಮತ್ತು ಬೈಕ್ ಕೀಯನ್ನು ಕಸಿದುಕೊಂಡು ನಂತರ ಬೆಳಿಗ್ಗೆ 9.30 ಗಂಟೆಗೆ ಮಾಲೀಕರಾದ ಸಂಪತ್ ಶೆಟ್ಟಿ ರವರು ಬಂದು ಆತನನ್ನು ಉದ್ದೇಶಿಸಿ ಬೋಳಿ ಮಗನೆ ನಿನಗೆ ಬೂಟ್ ಕಾಲಲ್ಲಿ ಒದೆಯುತ್ತೇನೆ ಎಂದು ಬೆದರಿಸಿ 9 30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಒಂಟಿಕಾಲಲ್ಲಿ ನಿಲ್ಲು ಇಲ್ಲ ಅಂದ್ರೆ ನಿನ್ನ ಜೀವ ಸಹಿತ ಬಿಡುವುದಿಲ್ಲ ಎಂದು ನಿಲ್ಲಿಸಿ ಅಮಾನವೀಯ ಕೃತ್ಯವನ್ನು ಈ ಕೃಷ್ಣಪ್ರಸಾದ್ ಕ್ಯಾಶ್ ಇಂಡಸ್ಟ್ರಿಯ ಮಾಲಿಕ ಸಂಪತ್ ಶೆಟ್ಟಿ, ಮತ್ತು ಚಂದ್ರಶೇಖರ್ ಎಸಗಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ( ಬಿಎನ್ಎಸ್)
2023 ಯುಎಸ್ 126. (2)352,351,(2)3,(5) ರಂತೆ ಪ್ರಕರಣದಾಲಾಗಿದೆ ಈ ಕೃಷ್ಣಪ್ರಸಾದ್ ಕ್ಯಾಶೂಇಂಡಸ್ಟ್ರೀಸ್ ಮಾಲಿಕ ಸಂಪತ್ ಶೆಟ್ಟಿ ಯನ್ನು ಮತ್ತು ಚಂದ್ರಶೇಖರ್ ರನ್ನು ಈ ಕೂಡಲೇ ಬಂಧಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರರವರು ಒತ್ತಾಯ ಹಾಗೂ ಈ ಅಮಾನವೀಯ ಕೃತ್ಯ ಎಸಗಿದ ಈ ಕಾರ್ಖಾನೆಯನ್ನು ಸರಕಾರ ಕೂಡಲೇ ಮುಟ್ಟುಗೋಲು. ಹಾಕಿಕೊಳ್ಳಬೇಕು ಮತ್ತು ಇದುವರೆಗೆ ಈ ಒಂದು ಫ್ಯಾಕ್ಟರಿಯಲ್ಲಿ ದೌರ್ಜನ್ಯಕ್ಕೊಳಗಾದ ಎಲ್ಲಾ ಕಾರ್ಮಿಕರಿಗೆ ಸಂಪೂರ್ಣ ಪರಿಹಾರವನ್ನು ಫ್ಯಾಕ್ಟರಿ ಮಾಲಕನಿಂದ ವಸೂಲಿ ಮಾಡುವಂತೆ ಹಾಗೂ ಕಾರ್ಮಿಕ ಇಲಾಖೆಯು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ತಪ್ಪಿದಲ್ಲಿ ಮುಂದೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದೆಂದು ಜಯ ಪೂಜಾರಿ ಲಕ್ಷ್ಮಿನಗರ ಆಗ್ರಹಿಸಿದ್ದಾರೆ.
Trending
- ಜೆಡಿಎಸ್. ದ .ಕ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗಿಶ್ ಶೆಟ್ಟಿ ಜಪ್ಪು ಸೇರಿದಂತೆ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳ ನೇಮಕ
- ಯಾದಗಿರಿ ದುರಂತ | ಮುಖಾಮುಖಿ ಡಿಕ್ಕಿಗೆ ಬೆಂಕಿ – 9 ಮಂದಿ ಸಾವು
- ವೈಟ್ ಸ್ಟೋನ್ ಶರೀಫ್ ಹಾಜಿಗೆ ಅರ್ಥಪೂರ್ಣ ಸನ್ಮಾನ — ಮನಸೂರೆಗೊಂಡ ಕಾರ್ಯಕ್ರಮ
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಆರ್ಥಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ

