ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಪ್ಪುವಿನ ಭಾರತ್ ಮೈದಾನದಲ್ಲಿ ನೂತನವಾಗಿ ಸುಮಾರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿಯವರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಕಾಮಗಾರಿಯ ಶಿಲನ್ಯಾಸ ನೆರವೇರಿಸಲಾಗಿತ್ತು. ಇದೀಗ ಕಟ್ಟಡವು ಲೋಕಾರ್ಪಣೆಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ ಪ್ರೇಮಾನಂದ ಶೆಟ್ಟಿಯವರಿಗೆ ವಿಶೇಷ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಮಕ್ಕಳ ಬಾಲ್ಯದ ಶಿಕ್ಷಣಕ್ಕಾಗಿ ಕ್ಷೇತ್ರದಲ್ಲಿ ಅಗತ್ಯವಿರುವೆಡೆ ಬೇಡಿಕೆಗನುಸಾರವಾಗಿ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಭಾನುಮತಿ, ದೀಪಕ್ ಪೈ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ರೇಷ್ಮಾ, ಅಂಗನವಾಡಿ ಕಾರ್ಯಕರ್ತೆ ರೇಖಾ, ಅಂಬಾ ಮಹೇಶ್ವರಿ ಟ್ರಸ್ಟ್ ನ ಅಧ್ಯಕ್ಷರಾದ ಸೀತಾರಾಮ್, ಪ್ರಕಾಶ್, ಯಶವಂತ್, ರಾಜೇಂದ್ರ, ನವೀನ್ ಕಿಲ್ಲೆ, ಮೊದಲಾದವರು ಉಪಸ್ಥಿತರಿದ್ದರು.




