ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.
ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ, ಶ್ರೀನಿವಾಸ್, ನ್ಯಾನ್ಸಿ ನೋರೋನ್ಹ, ಮೀರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Trending
- ಉಡುಪಿ ಕಾರ್ಮಿಕ ಘಟಕ ಸಭೆ: ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರ್ಣಯ
- ಅವಧಿ ಮುಗಿದ ಗ್ರಾಮ ಪಂಚಾಯತ್ಗಳಿಗೆ ಆಡಳಿತಾಧಿಕಾರಿಗಳ ನೇಮಕ, ಚುನಾವಣೆಗೂ ಮುನ್ನ ತಾತ್ಕಾಲಿಕ ವ್ಯವಸ್ಥೆ ಜಾರಿ
- ಮಂಗಳೂರು | ಮಾದಕವಸ್ತು ವಿರೋಧಿ ಕಾರ್ಯಾಚರಣೆ: ಕಾಲೇಜು ವಿದ್ಯಾರ್ಥಿಗಳ ಅಚ್ಚರಿಯ ತಪಾಸಣೆ – ಫಲಿತಾಂಶಗಳು ಉತ್ತೇಜನಕಾರಿ
- ಬೀದಿ ನಾಯಿಗಳ ಕಾಟ: ರಾಜ್ಯ ಸರ್ಕಾರಗಳು ಹೊಣೆಗಾರಿಕೆ ವಹಿಸಬೇಕು – ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ
- ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
- ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಟೆಕ್ಕಿ ಶರ್ಮಿಳಾ ಹತ್ಯೆ: ಬೆಂಕಿ ಅವಘಡದ ಹಿಂದೆ ಭೀಕರ ಸತ್ಯ ಬಯಲು | 18 ವರ್ಷದ ಆರೋಪಿಯ ಬಂಧನ
- ಸುನಂದ ಕೋಟ್ಯಾನ್ ಅವರಿಗೆ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ

