ಸಿದ್ದಾಪುರ | ಕುಂದಾಪುರ
ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.
ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.
ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Trending
- ಸಂತೆಕಟ್ಟೆಯಲ್ಲಿ 50 ವರ್ಷ ಹಳೆಯ ಬೃಹತ್ ಮರ ಕಡಿತ ಪರಿಸರದ ಮೇಲಿನ ಕ್ರೌರ್ಯ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ: ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ
- ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜೆಡಿಎಸ್ ಬರ ಹಾಗೂ ಪ್ರಕೃತಿ ವಿಕೋಪ ಅಧ್ಯಯನ ತಂಡ ಭೇಟಿ- ಕೂಡಲೇ ಸ್ಪಂದಿಸಿ ಅಧಿಕಾರಿಗಳಿಗೆ ಎಸ್. ಎಲ್. ಭೋಜೆಗೌಡ ಆಗ್ರಹ
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

